ಕುಶಾಲನಗರ ಜ.20: ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇಂದು ಮಂಗಳವಾರಸಂಜೆ 4:30 ಗಂಟೆಗೆ ಕುಶಾಲನಗರ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ ಪಿ ಶಶಿಧರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ. ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪ ರವರು ಸೇರಿದಂತೆ ಕೆಪಿಸಿಸಿ ಸದಸ್ಯರು, ಜಿಲ್ಲಾ ಮತ್ತು ವಿವಿಧ ಘಟಕಗಳ ಅಧ್ಯಕ್ಷರುಗಳು ನಾಯಕರು ಈ ಸಭೆಯಲ್ಲಿ ಉಪಸ್ಥಿತರಿರುವರು, ಸಭೆಗೆ ಪಕ್ಷದ ಮುಖಂಡರು, ನಾಯಕರು, ಕಾರ್ಯಕರ್ತರು,ಪಕ್ಷದ ಅಭಿಮಾನಿಗಳು, ಹಿತೈಷಿಗಳು ತಪ್ಪದೆ ಹಾಜರಾಗಬೇಕಾಗಿ ಪಕ್ಷದ ಮುಖಂಡರಾದ ನಂಗಾರು ಜಗ ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ




