Google search engine
Home♦️ಇತ್ತೀಚಿನ ಸುದ್ದಿಗಳು.ಬೊಪ್ಪಂಡ ದಿಯಾ ಭೀಮಯ್ಯ ಅವರಿಗೆ ಕರ್ನಾಟಕ ಸರ್ಕಾರದ ಬಾಲ ಗೌರವ ಪ್ರಶಸ್ತಿ

ಬೊಪ್ಪಂಡ ದಿಯಾ ಭೀಮಯ್ಯ ಅವರಿಗೆ ಕರ್ನಾಟಕ ಸರ್ಕಾರದ ಬಾಲ ಗೌರವ ಪ್ರಶಸ್ತಿ

ಮಡಿಕೇರಿ ಡಿ23: ಮೈಸೂರಿನ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿ ಕೊಡಗಿನ ಬಿ ದಿಯಾ ಭೀಮಯ್ಯ , ಕರ್ನಾಟಕ ಸರ್ಕಾರದ ಬಾಲ ವಿಕಾಸ ಅಕಾಡೆಮಿಯಿಂದ ಕೊಡಲ್ಪಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ ಲಭಿಸಿದೆ.

ಅಕಾಡೆಮಿಯು ಘೋಷಿಸಿದ ಆಯ್ಕೆ ಪಟ್ಟಿಯಂತೆ 2022-23 ನೇ ಸಾಲಿನ  ಜೂನಿಯರ್ ವಿಭಾಗದ ಕ್ರೀಡಾ ಕ್ಷೇತ್ರಕ್ಕೆ ಈ ಪ್ರಶಸ್ತಿ ಲಭಿಸಿದೆ. 

ಕರ್ನಾಟಕ ಅಗ್ರ ಶ್ರೇಯಾಂಕದ ಆಟಗಾರ್ತಿಯಾದ ಇವರು ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಬ್ಯಾಡ್ಮಿಂಟನ್ ತರಬೇತಿಯನ್ನು ಮೇದುರ ಅರುಣ್ ಪೆಮ್ಮಯ್ಯ ಅವರಿಂದ ಪಡೆದಿದ್ದು ಪ್ರಸ್ತುತ ಅಸ್ಸಾಮಿನ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆಯ ಅಧೀನದ ಸೆಂಟರ್ ಆಫ್ ಎಕ್ಸೆಲೆನ್ಸ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. 

ಬೊಪ್ಪಂಡ ಕುಸುಮ ಹಾಗೂ ಭೀಮಯ್ಯ ಅವರ ಪುತ್ರಿಯಾದ ಇವರಿಗೆ ಸದರಿ ಪ್ರಶಸ್ತಿಯನ್ನು ಡಿಸೆಂಬರ್ 16ನೇ ತಾರೀಖು ಕುಂದಾನಗರಿ ಬೆಳಗಾವಿಯ ಸುವರ್ಣ ಸೌಧದ   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಬಲೀಕರಣ ಇಲಾಖೆ ಮಾನ್ಯ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ,ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಶ್ರೀ ಸಂಗಮೇಶ ಬಬಲೇಶ್ವರ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಧಾನ ಮಾಡಲಾಯಿತು.

ಕಜಕ್ಸ್ತಾನ್ ನಲ್ಲಿ ನಡೆಯುತ್ತಿರುವ ಅಸ್ತಾನ ಇಂಟರ್ನ್ಯಾಷನಲ್ ಚಾಲೆಂಜ್ 2025 ಟೂರ್ನಿಯಲ್ಲಿ ಭಾಗವಹಿಸಲು ತೆರಳಿರುವ ದಿಯಾ ಭೀಮಯ್ಯ ಪರವಾಗಿ ಪ್ರಶಸ್ತಿಯನ್ನು ಅವರ ತಾಯಿ ಕುಸುಮ ಅವರು ಸ್ವೀಕರಿಸಿದರು.

 ಸಂಗೀತ, ನೃತ್ಯ, ಕ್ರೀಡೆ,ಚಿತ್ರಕಲೆ,ವಿಜ್ಞಾನ ಕ್ಷೇತ್ರದ ಬಹುಮುಖ ಪ್ರತಿಭೆಯಲ್ಲಿ ಉತ್ತಮ ಸಾಧನೆ ತೋರಿದ 18 ವರ್ಷದೊಳಗಿನ ಮಕ್ಕಳಿಗೆ ಕೊಡಲ್ಪಡುವ ಕರ್ನಾಟಕ ಸರ್ಕಾರದ ಉನ್ನತ ಪ್ರಶಸ್ತಿಯಾಗಿದೆ.

..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!