

ಮಡಿಕೇರಿ ಜ.25: ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ನೋಡುಗರ ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ ಈ ‘ಫಲಪುಷ್ಪ ಪ್ರದರ್ಶನ’ವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರು ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಬಾಂಬ್ ಮತ್ತು ಸ್ಫೋಟಕ ಪತ್ತೆ ಹಾಗೂ ಭದ್ರತಾ ತಪಾಸಣೆ ಕಾರ್ಯಕ್ಕಾಗಿ ಕೊಡಗು ಪೊಲೀಸ್ ಇಲಾಖೆಯು ಜಿಲ್ಲಾ ಪೊಲೀಸ್ ಘಟಕದ ಎಎಸ್ಸಿ ತಂಡವನ್ನು ನಿಯೋಜಿಸಿದೆ.




