
ಕೊಡಗಿನ ದೂರ ಸಂಪರ್ಕ ಕ್ಷೇತ್ರಕ್ಕೆ ಹೆಚ್ಚುವರಿ ಸೌಲಭ್ಯ ಒದಗಿಸುವ ಸಂಬಂಧ ಕೇಂದ್ರ ಸಚಿವರನ್ನು ಭೇಟಿಮಾಡಿದ ಸಂಸದ ಯದುವೀರ್ ಒಡೆಯರ್
ನವದೆಹಲಿ: ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿದ ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೊಡಗು ಜಿಲ್ಲೆಯ ದೂರ ಸಂಪರ್ಕ ಕ್ಷೇತ್ರದ ಕುರಿತಾಗಿ ಚರ್ಚಿಸಿದರು.
ಈ ಸಂದರ್ಭ ಕೊಡಗು ಜಿಲ್ಲೆಯಲ್ಲಿ ದೂರ ಸಂಪರ್ಕ ಕ್ಷೇತ್ರಕ್ಕೆ ಹೆಚ್ಚುವರಿ ಸೌಲಭ್ಯ ಒದಗಿಸಬೇಕಾದ ಅಗತ್ಯವಿದೆ, ಕೂಡಲೇ ಟವರ್ಗಳಿಗೆ ಬ್ಯಾಟರಿ ಸೆಟ್ ಅಳವಡಿಕೆ ಹಾಗೂ 15 ಪವರ್ ಪ್ಲಾಂಟ್ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿವಂತೆ ಹಾಗೂ ಮೂಲ ಸೌಕರ್ಯಗಳಿಗೆ ಆದ್ಯತೆ ಮತ್ತು ದೂರಸಂಪರ್ಕ ಅಭಿವೃದ್ಧಿಗೆ ತ್ವರಿತ ಕ್ರಮ ಕೈಗೊಳ್ಳಲು ಅವರು ಸಚಿವರಿಗೆ ಮನವಿ ಸಲ್ಲಿಸಿದರು.




