Google search engine
Home♦️ಇತ್ತೀಚಿನ ಸುದ್ದಿಗಳು.ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಒಟ್ಟು 428 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ. -...

ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಒಟ್ಟು 428 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ. – ಸದನದಲ್ಲಿ ಸಚಿವ ಈಶ್ವರ್  ಖಂಡ್ರೆ ಪ್ರಸ್ತಾಪ.

ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ರೈಲ್ವೆ ನಿಯಂತ್ರಿಸಲು ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಒಟ್ಟು 428 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ.

ರಾಜ್ಯದಲ್ಲಿರುವ ವನ್ಯ ಜೀವಿಧಾಮಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ಗಣತಿಯಂತೆ ಒಟ್ಟು 6,395 ಆನೆಗಳು ಮತ್ತು 563 ಹುಲಿಗಳಿವೆ. ವನ್ಯ ಜೀವಿಗಳು ಅರಣ್ಯ ಪ್ರದೇಶದಿಂದ ಹೊರ ಬರುವುದನ್ನು ತಡೆಗಟ್ಟಲು ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರೆಹಿಡಿಯಲಾಗಿರುತ್ತದೆ. ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಸಂಘರ್ಷ ಸಂಭವಿಸುತ್ತಿರುವ ಅರಣ್ಯದಂಚಿನ ಗಡಿರೇಖೆಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ. ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಂಘರ್ಷವಿರುವ ವಲಯಗಳಲ್ಲಿ ನಿರಂತರವಾಗಿ ಮುಂದಿನ ಮೂರು ತಿಂಗಳವರೆಗೆ ಗಸ್ತು ನಡೆಸಿ, ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲುಕ್ರಮವಹಿಸಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಇರುವ ಪ್ರತಿಯೊಂದು ವನ್ಯಜೀವಿ ವಲಯಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಂಟಾಗುವ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಕ್ಷಿಪ್ರ ಸ್ಪಂದನ ವಾಹನ ಹಾಗೂ ಡ್ರೋನ್ ಒಳಗೊಂಡಂತೆ ಇತರೆ ಉಪಕರಣಗಳೊಂದಿಗೆ ಒಂದು ಕ್ಷಿಪ್ರಸ್ಪಂದನ ತಂಡವನ್ನು (RRT team)  ಪಾಳಿ ಆಧಾರದ ಮೇಲೆ ರಚಿಸಿ, ಸದರಿ ಕ್ಷಿಪ್ರಸ್ಪಂದನ ತಂಡಕ್ಕೆ ಪ್ರಸ್ತುತ ಸಿಬ್ಬಂದಿಗಳನ್ನು ಅಸ್ತಿತ್ವದಲ್ಲಿರುವ ಆನೆ ಕಾರ್ಯಪಡೆ / ಕ್ಷಿಪ್ರ ಸ್ಪಂದನ ತಂಡ / ವಿಶೇಷ ಹುಲಿ ಸಂರಕ್ಷಣಾ ದಳದಿಂದ STPF ನಿಯೋಜಿಸಲಾಗಿದೆ.

ಮಾನವ ವನ್ಯಜೀವಿ ಸಂಘರ್ಷವಿರುವ ವನ್ಯಜೀವಿ ವಲಯಗಳ ಸಂಪೂರ್ಣ ಗಡಿರೇಖೆಗಳಲ್ಲಿ ಎಲ್ಲೆಲ್ಲಿ ನೆಟ್‌ವರ್ಕ್ ನ ಸಂಪರ್ಕವಿರುವುದು ಅಲ್ಲಿ Real time Surveillance GSM Camera with Garuda Software ಅನ್ನು ಅಳವಡಿಸಿ, ಸದರಿ ಮಾಹಿತಿಯನ್ನಾಧರಿಸಿ ಮಾನವವನ್ಯಜೀವಿ ಸಂಘರ್ಷ ನಿಯಂತ್ರಣದ ನಿರ್ವಹಣೆಯನ್ನು ಮಾಡಲಾಗುತ್ತಿದೆ.
ಆನೆ ಕಾರ್ಯಪಡೆ ಮತ್ತು ಚಿರತೆ ಕಾರ್ಯಪಡೆಗಳನ್ನು ರಚಿಸಿದ್ದು, ವನ್ಯ ಪ್ರಾಣಿಗಳಿಗಾಗಿ ಅರಣ್ಯ ಪ್ರದೇಶದ ಒಳಗೆ ಜಲ ಸಂಪನ್ಮೂಲಗಳು ಮತ್ತು ಆವಾಸ ಸ್ಥಾನಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ತಂತ್ರಜ್ಞಾನಗಳಬಳಕೆಯ ಮೂಲಕ ತ್ವರಿತ ಕಾರ್ಯಚರಣೆ ಕೈಗೊಳ್ಳಲಾಗುತ್ತಿದ್ದು, ಸಂಘರ್ಷ ತಡೆಗಟ್ಟಲು 5 ವರ್ಷ ಗಳ  ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಅರಣ್ಯ ಪರಿಸರ ಖಾತೆಯ ಸಚಿವರಾದ ಈಶ್ವರ ಖಂಡ್ರೆ ಬೆಳಗಾವಿ ಅಧಿವೇಶನದ ವೇಳೆ ಸದನದಲ್ಲಿ ಮಾಹಿತಿ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!