
ಕುಶಾಲನಗರ ಡಿ.30. ಗುಡ್ಡೆಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಮುಖ್ಯ ರಸ್ತೆ ಬದಿಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ಅನಧಿಕೃತ ನಾಮಫಲಕಗಳನ್ನು ಈ ದಿನ ತೆರೆವು ಗೊಳಿಸಲಾಯಿತು.
ಇತ್ತೀಚಿನ ದಿನಗಳಲ್ಲಿ ಮುಖ್ಯ ರಸ್ತೆಗಳಲ್ಲಿ ಹೆಚ್ಚಿದ ಜಾಹೀರಾತು ಫಲಕಗಳಿಂದ ಅಪಘಾತಗಳು ಹೆಚ್ಚಳಕ್ಕೆ ಕಾರಣವಾಗಿದ್ದು, ಈ ಕುರಿತು ಅನಧಿಕೃತ ಜಾಹೀರಾತು ನಾಮಫಲಕಗಳನ್ನು ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಂಡ ಹಿನ್ನೆಲೆ, ಪಂಚಾಯತಿ ವ್ಯಾಪ್ತಿಯಲ್ಲಿರುವ ಅನಧಿಕೃತ ಜಾಹೀರಾತು ನಾಮಫಲಕಗಳನ್ನು ತೆರವುಗೊಳಿಸಲಾಗುತ್ತಿದೆ.





