ಪೊನ್ನಂಪೇಟೆ ಜ.25: ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣಗೇರಿ ಗ್ರಾಮದ ಕೊಲ್ಲಿತೋಡುವಿನ ಅಜ್ಜಿಕುಟ್ಟಿರ ಹರೀಶ್ ಕುಟುಂಬಸ್ಥರ ಮನೆಗೆ ಕಡೆಗೆ ಹೋಗುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಸಾರ್ವಜನಿಕರ ಬಳಕೆಗೆ ಸಿದ್ಧವಾಗಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಸಹಕಾರದಿಂದ ರಸ್ತೆ ಕಾಮಗಾರಿಯು ಪೂರ್ಣಗೊಂಡಿದ್ದು, ಸಾರ್ವಜನಿಕರು ಈ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ.




