ಕುಶಾಲನಗರ, ಏ.02: ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವತಿಯಿಂದ ಬಸವನಹಳ್ಳಿ ಗ್ರಾಮದ ದಿಡಳ್ಳಿ ಪುನರ್ವಸತಿ ಕೇಂದ್ರದಲ್ಲಿರುವ ಗಣೇಶ್ ಅವರ ಪತ್ನಿ ಸುಮಿತ್ರ ಅವರಿಗೆ ಶೇಕಡ 25ರ ಅನುದಾನದಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಯಿತು. ಈ ಸಂದರ್ಭ ಆಡಳಿತ ಅಧಿಕಾರಿ ಶ್ರೀನಿವಾಸ್ ಪಿ ವಿ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್ ಎಮ್ ಆರ್ ಕಾರ್ಯದರ್ಶಿ ಕುಮಾರಸ್ವಾಮಿ ಉಪಸ್ಥಿತರಿದ್ದರು.




